ಸುದರ್ಶನ್ ಹರಟೆ ಕಟ್ಟೆ: ಮಂಗ(ಗ)ಳ ಯಾನ

ವಿಶ್ವದಲ್ಲೇ ಪ್ರಥಮಬಾರಿಗೆ ಪ್ರಥಮ ಪ್ರಯತ್ನದಲ್ಲೇ ಪ್ರತಿಷ್ಠಿತ ಇಸ್ರೋ ಸಂಸ್ಥೆಯ ವಿಜ್ಞಾನಿಗಳು ಮಂಗಳನ ಅಂಗಳಕ್ಕೆ ಉಪಗ್ರಹವೋಂದನ್ನು ಇಳಿಸಿದ್ದು ವಿಜಯಾ ಮತ್ತೆ  ಅವನ ದಂಡಿಗೆ  ಭಾರೀ ಉನ್ಮಾದನಾನ್ನೂ, ದೇಶಪ್ರೇಮವನ್ನೂ,ಹುರುಪನ್ನು ಮೂಡಿಸಿಬಿಟ್ಟಿತು. ದೇಶದ ಸಮಸ್ತ ಜನಸ್ತೋಮದ ಜೊತೆಜೊತೆಗೆ ತಾವೂ ಈ ಸಾಧನೆಯನ್ನು ಸಂಭ್ರಮಿಸಿ ಪರಸ್ಪರ ಭಾರತೀಯರಾಗಿ ಅಭಿನಂದಿಸಿಕೊಂಡರು. ಅದೇ ಖುಷಿಯಲ್ಲಿ ತಾವು ಭಾರತೀಯರಾಗಿ ಈ ಭೂಮಿಯಲ್ಲಿ ಜನ್ಮ ತಾಳಿದ್ದಕ್ಕೆ ಸಾರ್ಥಕಭಾವವನ್ನು ಅನುಭವಿಸಿದರು. ತಮಗೆ ಕೆಲಸ ಸಿಗುವ ಮುನ್ನ, ಪೋಲಿಗಳಾಗಿ ಅಲೆಯುತ್ತಿದ್ದಾಗ ದಿನವೂ ಪೈಸೆ ಪೈಸೆಗೆ ಲೆಕ್ಖ ಕೇಳುತ್ತಿದ್ದ ತಂದೆತಾಯಿಯರನ್ನು ದಿನವೂ ಶಪಿಸುತ್ತಿದ್ದ, ತಮ್ಮನ್ನು ಈ ಭೂಮಿಗೆ ತಂದ ತಪ್ಪಿಗೆ ಅವರನ್ನೇ ನಿಂದಿಸುತ್ತಿದ್ದ ಅವರುಗಳಿಗೆಲ್ಲ ತಮ್ಮ ಮಾತಾ ಪಿತೃಗಳು ದೈವೀ ಸಮಾನರಾಗಿ ಗೋಚರಿಸಿದರು. ಅವರಿಗೆ ವಂದಿಸಿ ಹೆಚ್ಚು ಹುರುಪಿನಿಂದ ತಮ್ಮ ಕೆಲಸಕ್ಕೆ ನಡೆದರು.

ಅದಾದ ಒಂದು ತಿಂಗಳು ವಿಜಯನ ಸುದ್ದಿಯೇ ಇರಲಿಲ್ಲ,. ಯಾವ ಫೋನಿಗೂ ಈ-ಮೇಲಿಗೂ ಸಿಗಲಿಲ್ಲ. ಎಲ್ಲಿ ಹೋದ ಇವನು ಎಂದು ಎಲ್ಲರೂ ತಲೆ ಕೆರೆದು ಕೊಳ್ಳುತ್ತಿರುವಾಗಲೇ ಅವನು ಪ್ರತ್ಯಕ್ಷನಾದ ಎಲ್ಲಿ ಹಾಳಾಗಿ ಹೋಗಿದ್ಯೋ ದರ್ಬೇಶಿ  ಈ -ಮೇಲು ಕಳಿಸಿದರು ಉತ್ತರ ಇಲ್ಲ ಎಂದು ಅವರು ಕೇಳಲಾಗಿ,  ನಾನು ಹಾರುತ ದೂರಾ ದೂರಾ, ಫೀ ಮೇಲು ಜೊತೆ ಹೋಗಿರುವಾಗ ನಿಮ್ಮ ಮೇಲು ಗಳಿಗೆ ನನ್ನ ಜೀವನದಲ್ಲಿ ಪಾಲಿಲ್ಲ ಎಂದು ಅಸಂಬದ್ಧವಾಗಿ ನುಡಿದ. ಅದೇನು ಸರಿಯಾಗಿ ಹೇಳೋ ಅಂದಿದ್ದಕ್ಕೆ, ನಾನು ಮಾರ್ಸು,ಆರ್ಬಿಟ್ ಎಲ್ಲ ಸೊನಾಲಿ ಜೊತೆ ಸುತ್ತುಹಾಕಿಕೊಂಡು ಬಂದೆನಮ್ಮ. ಬೇಕಾದ್ರೆ ನೀವೂ ಮಾರ್ಸ್ ನೋಡ್ಬೋದು. ಅಷ್ಟ್ಯಾಕೆ, ಗ್ಯಾಲಾಕ್ಸೀನೆ ಭೇದಿಸಬಹುದು. ಡೀಟೈಲಾಗಿ ಕೇಳ್ಬೇಕಾದ್ರೆ ಸಾಯಂಕಾಲ ನಮ್ಮ ಮಾಮೂಲು ಜಾಗಕ್ಕೆ ಬನ್ನಿ. ಕಾಫೀ ತಿಂಡಿ ಜೊತೆ ಹೇಳ್ತೀನಿ ಈಗ ಟೈಮಿಲ್ಲಮ್ಮ ಅಂತ ತನ್ನ “ಆಪಲ್ ವಾಚು” ನೋಡಿಕೊಂಡು ಹೊರಟು ಹೋದ. Read More »

ಸುದರ್ಶನ ಗುರುರಾಜರಾವ್ ಅವರಿಂದ ‘ಗುರುವಂದನೆ’

ಇಂದು ಗುರು ಪೌರ್ಣಮಿಯ ದಿನದ ಕಾಣಿಕೆ.

ಗುರುವಂದನೆ

ನಮ್ಮ ವೈದ್ಯಕೀಯ ಶಿಕ್ಷಣಾರಂಭದ ೨೫ ನೇ ವರ್ಷ ತುಂಬಿದ, ಬೆಳ್ಳಿ ಹಬ್ಬದಾಚರಣೆಯ ಸಂದರ್ಭದಲ್ಲಿ ಗುರುವಂದನೆ ಹಮ್ಮಿಕೊಂಡಿದ್ದೆವು. ಆ ದಿನ ನಾನು ಮಾಡಿದ ಸ್ವಾಗತ ಭಾಷಣದ ಲೇಖನ ರೂಪ

ಪೂರ್ವ ಪೀಠಿಕೆ

(ಸೆಪ್ತೆಂಬರ್ ೫ನೇ ತಾರೀಖು ಶಿಕ್ಷಕರ ದಿನ ನಮ್ಮ ಹೆಮ್ಮೆಯ  ಡಾ. ರಾಧಾಕೃಷ್ಣನ್ ಅವರ ಜನ್ಮದಿನದ ಸಂದರ್ಭದಲ್ಲಿ ಆಚರಿಸಲ್ಪಡುವ ದಿನ .  ಇದಕ್ಕೆ ಸ್ವಲ್ಪ ಮೊದಲಲ್ಲಿ  ಗುರುಪೂರ್ಣಿಮೆಯೂ ನಮ್ಮ ಪರಂಪರೆಯಲ್ಲಿ ಆಚರಿಸಲ್ಪಡುತ್ತದೆ. ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಒಂದು ವಿಶಿಷ್ಟ ಅಂಗ. ಚೀನಾ ನಾಗರೀಕತೆಯಲ್ಲಿ ಹೊರತು ಬೇರೆಲ್ಲ  (ಪ್ರಮುಖವಾಗಿ ಯೂರೋಪದಲ್ಲಿ) ನಾಗರೀಕತೆಗಳಲ್ಲಿ ಶಿಕ್ಷಣ ಎನ್ನುವುದು ಒಂದು ವಹಿವಾಟಿನಂತೆ ಆಚರಿಸಲ್ಪಡುತ್ತಿದ್ದ ಕಾಲದಲ್ಲಿ ಹಾಗೂ ಅದಕ್ಕೆ ಬಹಳ ಹಿಂದೆ ಭಾರತದಲ್ಲಿ ವಿದ್ಯೆಯನ್ನು ವಿದ್ಯೆ ಕಲಿಸುವುದಕ್ಕಾಗಿಯೇ, ಯಾವ ಪ್ರತಿಫಲದ ಅಪೇಕ್ಷೆ ಇಲ್ಲದೆ ಕಲಿಯುವುದಕ್ಕೆ ಹಾಗೂ ಕಲಿಸುವುದಕ್ಕೆ ತಕ್ಕ ವಿದ್ಯಾರ್ಥಿ ಸಿಕ್ಕಲ್ಲಿ ಹೇಳಿಕೊಡುವ ಪರಿಪಾಠ ಇತ್ತು; ಕಡಿಮೆಯಾದರೂ ಈಗಲೂ ಇದೆ. ಗುರು ಶಿಷ್ಯ ಸಂಬಂಧಿತ ಕಥೆಗಳು ನಮ್ಮ ಪುರಾಣದಲ್ಲಿ ಸಾಕಷ್ಟಿವೆ.)

Read More »