ಹೊರನಾಡಿನ ಕನ್ನಡಿಗರು:  ಅಜ್ಜಿ – ಮೊಮ್ಮಗಳ ಸಂವಾದ; ವತ್ಸಲಾ ರಾಮಮೂರ್ತಿ ಬರೆದ ಲೇಖನ

ಸಮಸುಖಿ (ಸಮದುಃಖಿ) ಕನ್ನಡಿಗರಿಗೆ ಸಬ್ಸ್ಟಿಟ್ಯೂಟ್ ಸಂಪಾದಕನ ನಮಸ್ಕಾರಗಳು.  ಕೆಳಗೆ ಬರೆದಿರುವ ಸಂವಾದ ಬರಿಯ ಲೇಖಕಿಯದಲ್ಲ, ಅದು ನಮ್ಮಲ್ಲಿ ಅನೇಕರ ಜೀವನದಲ್ಲಿ ಒಮ್ಮೆ ಬರಬಹುದಾದ ಘಳಿಗೆ.  ಇದು ಬರಿಯ ಕನ್ನಡಿಗರಿಗೆ ಮಾತ್ರವಲ್ಲ, ಯಾವ ವಲಸಿಗರಿಗೂ ಬರಬಹುದಾದ ಪ್ರಶ್ನೆ. ಓದಿ, ನಿಮ್ಮ ಸ್ವಂತದ ಅಥವಾ ಕೇಳಿದ / ನೋಡಿದ ಅನುಭವವೇನಾದರೂ ಇದ್ದರೆ, ಹಂಚಿಕೊಳ್ಳಿ - ಸಂ. 
*****************************************
ನನ್ನ  ಮೊಮ್ಮಗಳು ನನ್ನನ್ನು ಒಂದು question ಕೇಳಿದಳು “ಅಜ್ಜಿ ನಾನು ಯಾರು? ನೀನು ಎಲ್ಲಿಂದ ಬಂದೆ?  ಯಾಕೆ ಬಂದಿ?”
ಅವಳಿಗೆ ಕೂಡಲೆ ಉತ್ತರ ಕೊಡಲು ಹೊಳೆಯಲ್ಲಿಲ್ಲ.  ತುಸು ತಡೆದು “ಮೊಮ್ಮಗಳೇ, ನಮ್ಮ ಚರಿತ್ರೆಯನ್ನು ಕೇಳುವಂತವಳಾಗು.”
“ಹಾಗಾದರೆ ಅಜ್ಜಮ್ಮ, ನಿಮ್ಮ ಊರು, ಸಂಸ್ಕೃತಿಯನ್ನು ವಿವರವಾಗಿ ತಿಳಿಸು” ಎಂಬುದಾಗಿ ಕೇಳಲು, ಕೆಳ ಕಂಡ ಕತೆ ಹೇಳಿದೆ.
“ನಾವು ಹೊರನಾಡಿನ ಕನ್ನಡಿಗರು.  ನಾವು ವಲಸೆ ಬಂದವರು.”

“ಹಾಗಾದರೆ ಬೆಂಗಳೂರಿನಿಂದ ಮುಂಬಯಿ, ಚೆನ್ನೈ ಮುಂತಾದ ಪ್ರದೇಶಕ್ಕೆ ಹೋಗುತ್ತಾರಲ್ಲ? ಅವರೆಲ್ಲಾ ವಲಸೆ ಹೋದವರೇ?”
“ಹೌದು ಬಂಗಾರಿ, ಅವರೊಬ್ಬರೇ ಅಲ್ಲ.  ಅಮೆರಿಕ, ಇಂಗ್ಲಂಡ್‌, ಇನ್ನೂ ಬೇರೆ  ಬೇರೆ ದೇಶಕ್ಕೆ ನಮ್ಮ ಕನ್ನಡನಾಡಿನಿಂದ ಹೋದವರೆಲ್ಲಾ ವಲಸೆ ಹೋದವರೇ.” 
“ಪರದೇಶಕ್ಕೆ ಕೆಲಸ ಹುಡಿಕಿಕೊಂಡು ಬಂದವರೇ ಹೆಚ್ಚು. ಕೆಲಸ ಸಿಕ್ಕಿದ ಮೇಲೆ ಮನೆ, ಸಂಸಾರ ಎಲ್ಲಾ ಮಾಡಿಯಾಯಿತು.”

“ಹಾಗಾದರೆ ನೀವೆಲ್ಲಾ ಸಂತೋಷವಾಗಿ ಇದ್ದೀರಾ?  ನಿಮಗೆ ನಿಮ್ಮ ಭಾಷೆ, ಪರಂಪರೆ, ಚರಿತ್ರೆ, ಹಬ್ಬ-ಹುಣ್ಣಿಮೆಗಳು ಮಿಸ್ಸಾಗುತ್ತಾ?” ಎಂದು ಕೇಳಿದಳು.
“ಹೌದು ಕಣೆ ಖಂಡಿತವಾಗಲೂ ಮಿಸ್ಸಾಗುತ್ತದೆ.  ವಲಸೆ ಬಂದವರು ತುಂಬಾ ಜನ ಒಳ್ಳೆಯ ಕೆಲಸ, ಹಣ ಸಂಪಾದನೆ ಮಾಡಿ ಗೌರವಾಗಿ ಬಾಳುತ್ತಿದ್ದಾರೆ.  ಆದರೆ ನಮಗೆ ನಮ್ಮದು, ನಮ್ಮ ಬಾಲ್ಯದ ಅನುಭವಗಳನ್ನು ಮರೆಯಲು ಸಾಧ್ಯವೇ?  ನಮ್ಮ ಪರಂಪರೆ, ನಮ್ಮ ಭಾವನೆಗಳನ್ನು ಅಳಿಸಲು ಸಾಧ್ಯವೇ?  ಅದೇ ಅಲ್ಲವೇ ನಮ್ಮ ವ್ಯಕ್ತಿತ್ವಕ್ಕೆ ಅಡಿಪಾಯ.  ಅಡಿಪಾಯವನ್ನು ಮುರಿಯಲು ಸಾಧ್ಯವೇ?  ಮುರಿದರೆ ನಮ್ಮ ಬದುಕು ಬರಡಲ್ಲವೇ, ನಮ್ಮ ವ್ಯಕ್ತಿತ್ವ ಒಂದು ದೊಡ್ಡ ಅಂಶವನ್ನ ಕಳೆದ ಹಾಗಲ್ಲವೇ?”

ಮತ್ತೊಂದು ಸವಾಲು – “ನಿಮಗೆ ಕನ್ನಡ ಬಳಗ ಯಾಕೆ ಬೇಕು?”
“ನಮ್ಮ ವ್ಯಕ್ತಿತ್ವದ ಅಡಿಪಾಯಕ್ಕೆ ಆಸರೆ ಬೇಡವೇ?  ನಾವು ಒಂದು ಸಂಘದಲ್ಲಿಯಿದ್ದೇವೆ.  ನಾವು ಭಾಷೆ, ಚರಿತ್ರೆ, ವಾತ್ಯಲ್ಯ ಮುಂತಾದ ಮಾನವೀಯ ಗುಣಗಳನ್ನು ಹಂಚಿಕೊಳ್ಳುತ್ತೇವೆ.  ಈ ಹೊರನಾಡಿನ ಸಂಘಗಳು ನಮ್ಮ ವ್ಯಕ್ತಿತ್ವಕ್ಕೆ ಒಂದು meaning ಕೊಡುತ್ತದೆ.  ನಾವು ವಲಸೆ ಬಂದ ದೇಶಕ್ಕೆ ಹೊಂದಿಕೊಂಡರೂ, ಈ ಹೊರನಾಡು ನಮ್ಮದು ಎನಿಸಲು ಕಷ್ಷ ಅನಿಸುತ್ತದೆ.  ನಮಗೆ chipsಗಿಂತ ಕೋಡುಬಳೆ ರುಚಿಯಲ್ಲವೇ?”

ಮತ್ತೊಂದು ಕ್ವೆಶ್ಚನ್ನು – “ಸರಿ ಇಲ್ಲಿಗೆ ಬಂದಿರಿ. ನಿಮ್ಮ ಜೀವನ ಕಟ್ಟಿದಿರಿ. ಮಕ್ಕಳು, ಮರಿಗಳಾದವು.  ನಮ್ಮ ವಂಶ ಬೆಳೆಯುತ್ತಿದೆ.
ಈಗ ನಾವು ೩ನೆ ಜನರೇಶನ್ನು.  ಮೊದಲನೆಯದು ನೀವು; ಹೊರನಾಡಿಗೆ ಬಂದು ನಿಮ್ಮ ಭಾಷೆ, ಸಂಸ್ಕೃತಿ ಬೆಳಿಸಿ, ಉಳಿಸಿಕೊಂಡಿರಿ.

“ಎರಡನೆ ಜನಾಂಗ ನಿಮ್ಮ ಮಕ್ಕಳು. ನನ್ನ ತಂದೆ-ತಾಯಿಯರು. ಇಲ್ಲೇ ಹುಟ್ಟಿ ಬೆಳದವರು.  ಅವರು ನಿಮ್ಮ ಅಡುಗೆ ತಿಂಡಿ ಎಲ್ಲ ಮಜವಾಗಿ ತಿನ್ನುತ್ತಾರೆ. ಮನೆಯಲ್ಲಿ ನಿಮ್ಮ ಮಾತು ಕೇಳಬಹುದು. ಮನೆಯ ಹೊರಗೆ ಅವರು ಈ ದೇಶದ ಜನರನ್ನೇ ಅನುಸರಿಸುತ್ತಾರೆ.  ಕನ್ನಡ ಮಾತನಾಡಲು ಬರುವುದಿಲ್ಲ.  ಚಿಕ್ಕವರಾಗಿದ್ದಾಗ ಕನ್ನಡ ಕಲಿಯಲು ನೀವು ಸಹಾಯಮಾಡಲಿಲ್ಲ. ಅವರು ಕುವೆಂಪು, ದ ರಾ ಬೇಂದ್ರೆಯಂಥವರ ಹೆಸರು ಕೇಳಿಲ್ಲ.  ಅವರಿಗೆ ನಿಮಗೆ ಇರುವಷ್ಟು ಮಮತೆ ನಿಮ್ಮ ಪರಂಪರೆ ಮೇಲೆ ಖಂಡಿತಯಿಲ್ಲ.  ಅವರು ಕನ್ನಡ ಬಳಗಕ್ಕೆ ಬರುವುದಿಲ್ಲ.  ಬಂದರೂ, ‘we don’t understand anything’ ಅಂತಾರೆ.

ಮೂರನೆಯ ಜನಾಂಗ ನಿಮ್ಮ ಮೊಮ್ಮಕ್ಕಳು. ಅವರ ಬಗ್ಗೆ ಮತ್ತೊಂದು ಸವಾಲು.
“ಅಜ್ಜಿ ನಮಗೆ ನಿಮ್ಮ ಭಾಷೆ ಗೊತ್ತಾಗುವುದಿಲ್ಲ.  ಬೆಂಗಳೂರಿಗೆ ಒಂದೇ ಸಲ ಮಮ್ಮಿ ಡ್ಯಾಡಿ ಜತೆ ಹೋಗಿದ್ದೆ.  ಎಲ್ಲರೂ Englishನಲ್ಲೇ ಮಾತಾಡಿದರು.  ಮಮ್ಮಿ ಡ್ಯಾಡಿ ಕನ್ನಡ ಮಾತನಾಡುವುದಿಲ್ಲ.  ಅವರಿಗೆ ಬರಲ್ಲ ಅಂತಾರೆ.  ಹಬ್ಬ, ಹರಿದಿನ ಮಾಡುವುದಿಲ್ಲ.  ನಾವು ಏನು ಮಾಡಬೇಕು?  ಬ್ರಿಟಿಶ್ ಜನರಂತೆ ಇರಬೇಕೆ?”

“ಇದಲ್ಲದೆ ಮತ್ತೊಂದು ಗುಂಪಿದೆ ಈಗ. ಇವರು ಇತ್ತೀಚಿಗೆ ಹೊರನಾಡಿಗೆ ವಲಸೆ ಬಂದವರು.  ಹೊಸ ಟೆಕ್ನಾಲಜಿ ತಿಳಿದವರು. ಅವರೊಡನೆ ನಮ್ಮ ಮೊದಲನೆ ಜನಾಂಗ (ಹಿರಿಯರು, ೩೦-೪೦ವರುಷಗಳಿಂದ ಹೊರನಾಡಿನಲ್ಲಿ ಇರುವವರು) ಬಾಂಧವ್ಯ ಬೆಳಸಲು ಸಾದ್ಯವೇ?”

“ನನ್ನ ಕತೆ ಮುಗಿಯಿತು. ನಿನ್ನ ಸವಾಲಿಗೆ ನನ್ನ ಹತ್ತಿರ ಉತ್ತರವಿಲ್ಲ!”

- ವತ್ಸಲಾ ರಾಮಮೂರ್ತಿ

*****************************************************

ಬೆಂಗಳೂರಿನಲ್ಲಿ ಆರು ವಾರ – ಬೇಸಿಂಗ್ ಸ್ಟೋಕ್ ರಾಮಮೂರ್ತಿ ಲೇಖನ

 ಕೋವಿಡ್ ಪಿಡುಗು ನಮ್ಮನ್ನೆಲ್ಲ ಬಾಧಿಸಿ ಹೋದ ನಂತರ ಹಳೆಯ ಅಡಕಪದಗಳಿಗೆ (Acronyms) ಹೊಸದೊಂದು ಅರ್ಥ ಬಂದಿದೆ. BC(Before Christ) ಈಗ Before Covid ಎಂತಲೂ,  AD (Anno Domini) ಈಗ After Disease,  ಅಥವಾ After Done (with Corona) ಎಂತಲೂ ಕೆಲವರು ಕರೆಯುತ್ತಾರೆ. ಇತ್ತೀಚೆಗೆ ಕೋರೋನಾ ನಂತ ಮೊದಲ ಬಾರಿ ಬೆಂಗಳೂರಿಗೆ ಹೋದ ಬೇಸಿಂಗ್ ಸ್ಟೋಕ್ ರಾಮಮೂರ್ತಿಯವರ ತಮ್ಮ ಆರು ವಾರಗಳ ಕಾಲದ ವಾಸ್ತವ್ಯದಲ್ಲಿ ಅನುಭವಿಸಿದ ಸಿಹಿ, ಆಶ್ಚರ್ಯಕರ ಮತ್ತು ಇತರೇ ಅನುಭವಗಳವನ್ನು ಈ ಸ್ವಾರಸ್ಯಕರವಾದ ಲೇಖನದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಅವರ ಟ್ರೇಡ್ ಮಾರ್ಕ್ ಆದ ಅಲ್ಲಿ ಸ್ವಲ್ಪ ಇತಿಹಾಸ, ಇಲ್ಲಿ ಸ್ವಲ್ಪ ಹಾರ್ಟಿಕಲ್ಚರ್, ಬಾಟನಿ ಹೀಗೆ ಸ್ವಲ್ಪ spice sprinkling ಸಹ ಉದುರಿಸಿ ಉಣಬಡಿಸಿದ್ದಾರೆ. Enjoy! (ತತ್ಕಾಲ್ ಸಂಪಾದಕ)
ಕೋವಿಡ್ ನಿಂದ ಕಳೆದ ಮೂರು ವರ್ಷ ಬೆಂಗಳೂರಿಗೆ ಹೋಗಿರಲಿಲ್ಲ. ಈ ವರ್ಷ ಜನವರಿ ತಿಂಗಳಲ್ಲಿ ಹೋಗಿ ಆರು ವಾರ ಇದ್ದು,  ಅಲ್ಲಿ ಈ ಮೂರು ವರ್ಷಗಳಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ ಈ ಲೇಖನ. ಬೆಂಗಳೂರು Airport  ಬಹಳ ಚೆನ್ನಾಗಿದೆ ಇದು ನಮ್ಮೆಲ್ಲರ ಹೆಮ್ಮೆಯ ವಿಷಯ. Immigration ಸಹ ತುಂಬಾ ಸರಾಗ ಮತ್ತು ವಿನಯದಿಂದ ನಡೆಯಿತು. ಕೋವಿಡ್ ಔಪಚಾರಿಕತೆಗಳು ಏನೂ ಇರಲಿಲ್ಲ.  ಕೆಲವು ವರ್ಷದ ಹಿಂದೆ Auto ಅಥವಾ Taxi ಸಮಸ್ಯೆ ಇತ್ತು, ಆದರೆ ಈಗ Uber ಮತ್ತು Ola ಇರುವುದರಿಂದ ಯಾವ ತೊಂದರೆಯೂ ಇಲ್ಲ. ಸುಮಾರು ಐದು ನಿಮಿಷದ ಒಳಗೆ ನಿಮ್ಮ ವಾಹನ ಬರುವ ಸಾಧ್ಯತೆ ಇದೆ.  ದರದ ಚೌಕಾಸಿ ಅಥವಾ ಜಗಳ ಬರಿ ನೆನಪುಗಳು ಅಷ್ಟೇ !
ಇನ್ನೊಂದು ವಿಷಯ ಗಮನಕ್ಕೆ ಬರುವುದು  ದೇಶದಲ್ಲಿ ಆಗಿರುವ Digital Revolution. ರಸ್ತೆ ಯಲ್ಲಿ ತರಕಾರಿ ಮಾರುವರು , ಚಾಟ್ ಅಂಗಡಿಯವರು ಸಹ ಇದರಲ್ಲಿ ಭಾಗವಹಿಸಿದ್ದಾರೆ. ಫೋನಿನಿಂದ QR Code scan ಮಾಡಬಹುದು. ಅನೇಕ ಉಪಹಾರ ಮಂದಿರಗಳಲ್ಲಿ QR  code ನಿಂದ ಅವತ್ತಿನ ತಿಂಡಿಗಳ ವಿವರ ತಿಳಿಯಬಹುದು. ಅಂಗಡಿ ಸಾಮಾನುಗಳನ್ನು on line ನಲ್ಲಿ ತರಿಸಬಹುದು. ನೋಡಿದರೆ ಬೆಂಗಳೂರಿನಲ್ಲಿ ಎಲ್ಲರ ಮನೆಯಲ್ಲೂ  ಒಂದು ನಾಲಕ್ಕು ಚಕ್ರದ  ವಾಹನ  ಇರಬಹುದೇನೋ   ಅನ್ನಿಸುತ್ತೆದೆ, ರಸ್ತೆಯಲ್ಲಿ ಅಷ್ಟೊಂದು traffic! Highway ಗಳು ಈಗ ಚೆನ್ನಾಗಿವೆ, ಆದರೆ ಬಹು ಮಂದಿ ವಾಹನ ನಡೆಸುವ ನಿಯಮಗಳನ್ನು ಪಾಲಿಸಿವುದಿಲ್ಲ ಅನ್ನುವುದು ಬಹಳ ಶೋಚಿನಿಯವಾದ ವಿಷಯ. 
 ಇನ್ನು ಮೆಟ್ರೋ (ನಮ್ಮ ಮೆಟ್ರೋ ) ಬಹಳ ಅನುಕೂಲವಾಗಿದೆ. ನಾನು ಬಹಳ ಹಿಂದೆ ಒಂದು ಸಲಿ ಇಲ್ಲಿ ಪ್ರಯಾಣ ಮಾಡಿದ್ದೆ.
ಆದರೆ ಏನು ಬದಲಾವಣೆ ಆಗಿದೆ ಅನ್ನುವ ವಿಚಾರ ಗೊತ್ತಿರಲಿಲ್ಲ. ಸರಿ, ಇದರಲ್ಲಿ ಪ್ರಯಾಣ ಮಾಡಿ ನೋಡೋಣ ಅಂತ ನ್ಯಾಷನಲ್ ಕಾಲೇಜು ನಿಲ್ದಾಣಕ್ಕೆ ಬಂದೆ. ಟಿಕೆಟ್ counter ನಲ್ಲಿ ಮಂತ್ರಿ ಮಾಲ್ ಗೆ ಎಷ್ಟು ಅಂತ ಕೇಳಿದಾಗ ಆಕೆ ೧೮ ರೂಪಾಯಿ ಅಂದಳು, ನಾನು ಆಶ್ಚರ್ಯದಿಂದ ”೧೮ ಆ?” ಅಂದೆ. ಆಕೆ ಹೌದು ಸರ್, ಸೀನಿಯರ್ concession ಇಲ್ಲ ಅಂದಳು! ನನಗೆ ಆಶ್ಚರ್ಯ ಆಗಿದ್ದು ಕೇವಲ ೧೮ ರೂಪಾಯಿ ಮಾತ್ರ ಅಂತ , ಆದರೆ ಆಕೆ ನಾನು ಇದು ದುಬಾರಿ ಅಂತ ಹೇಳುತ್ತಿದ್ದೇನೆ ಅಂತ ತಿಳಿದಿರಬೇಕು!! (London Tube ನಲ್ಲಿ ಕನಿಷ್ಠ £೭!) ದುಡ್ಡು ಕೊಟ್ಟೆ,  ಚಿಲ್ಲರೆ ಬಂತು,  ಟಿಕೆಟ್ ಕೊಡಿ ಅಂದೆ. ಆಕೆ ಕೊಟ್ಟಿದ್ದೀನಿ ನೋಡಿ ಸರ್ ಅಂದಳು. (ಈ ಮನುಷ್ಯ ಎಲ್ಲಿಂದ ಬಂದಿದ್ದಾನೆ ಅಂತ ಯೋಚಿಸರಬಹುದು!!). ನೋಡಿದರೆ ಟಿಕೆಟ್ ಒಂದು ಬಿಲ್ಲೆ ಆದರೆ Digital ಬಿಲ್ಲೆ ! ಅಂತೂ ಪ್ರಯಾಣ ಕೇವಲ ೧೦ ನಿಮಿಷ ಮಾತ್ರ.  ಅದೇ Auto ನಲ್ಲಿ ಮಲ್ಲೇಶ್ವರಕ್ಕೆ ಹೋಗಿದ್ದರೆ ೧೦೦ ರೂಪಾಯಿ ಮತ್ತು ಅರ್ಧ ಅಥವಾ ಮುಕ್ಕಾಲು ಗಂಟೆ ಸಮಯ ಹಿಡಿಯುತ್ತಿತ್ತು. 
ಬೆಳಗ್ಗೆ ಅಥವಾ ಸಾಯಂಕಾಲ ತಿಂಡಿ/ಊಟಕ್ಕೆ ಜನಗಳು ಉಪಹಾರ ಮಂದಿರಗಳ ಮುಂದೆ ನಿಂತಿರುವುದನ್ನ ನೋಡಿದರೆ  ಮನೆಯಲ್ಲಿ ಅಡಿಗೆ ಮಾಡುವ ಅಭ್ಯಾಸ ಇಲ್ಲವೇನೋ ಅನ್ನುವ ಸಂಶಯ ಹುಟ್ಟುತ್ತದೆ. ಗಾಂಧಿ ಬಜಾರ್ನಲ್ಲಿರುವ ಹೆಸರಾದ  ವಿದ್ಯಾರ್ಥಿ ಭವನದ ಮುಂದೆ queue ನಿಂತಿರುತ್ತಾರೆ. ಎಲ್ಲಾ  ಉಪಹಾರ ಮಂದಿರಗಳಲ್ಲೂ ಇದೇ ಸಮಸ್ಯೆ.  
ಸಂಕ್ರಾಂತಿ ಸಮಯದಲ್ಲಿ, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು ಮುಂತಾದವು ಈಗ ಅನೇಕ ಅಂಗಡಿಗಳಲ್ಲಿ Prepack ಸಿಗುತ್ತೆ. ಮನೆಯಲ್ಲಿ ಕಷ್ಟ ಪಡಬೇಕಾದ ಅವಶ್ಯಕತೆ ಇಲ್ಲ. ಯುಗಾದಿ ಹಬ್ಬಕ್ಕೆ ಹೋಳಿಗೆ ಮಾಡುವ ಅಂಗಡಿಗಳು ಅನೇಕ.   
 ನಾವು ಇದ್ದ ಆರು ವಾರದಲ್ಲಿ, ಅಡಿಗೆ ಮಾಡಿಕೊಳ್ಳುವ ಸೌಲಭ್ಯ ಇದ್ದಿದ್ದರೂ ಮಾಡುವ ಅವಶ್ಯಕತೆ ಇರಲಿಲ್ಲ. ಹತ್ತಿರದಲ್ಲೇ  ಇದ್ದ ವಿದ್ಯಾರ್ಥಿ ಭವನ, ಭಟ್ಟರ ಹೋಟೆಲ್ ಅಥವಾ ಉಡುಪಿ ಕೃಷ್ಣ ಭವನದಲ್ಲಿ ಬೆಳಗ್ಗೆ ಬಿಸಿ ಬಿಸಿ ಇಡ್ಲಿ ದೋಸೆ (Take Away) ಸಿಗಬೇಕಾದರೆ ಮನೆಯಲ್ಲಿ ಕಷ್ಟ ಪಡಬೇಕಾಗಿಲ್ಲ ಅಲ್ಲವೇ?  ಊಟ ಸಹ On Line ನಲ್ಲಿ ತರಿಸಬಹುದು! When in Rome Do as Romans Do ಅಂದ ಹಾಗೆ. 
ನಮ್ಮ ಮನೆಯ ಕಿರಿಯ ಇಬ್ಬರು ಸಂಬಂಧಿಕರು ಬ್ರೂವರಿ (Brewery )ಗೆ ಹೋಗೋಣ ಅಂದರು. (ಬೆಂಗಳೂರಿನಲ್ಲಿ ಸುಮಾರು ೩೦-೪೦ ಇವೆಯಂತೆ). ಸಾಯಂಕಾಲ ೭ ೩೦ ಕ್ಕೆ booking ಇದ್ದಿದ್ದು, ಸುಮಾರು ೧೫೦೦ ಜನ ಇದ್ದಿರಬಹುದು ಆ ಸಮಯದಲ್ಲಿ! QR  code scan ಮಾಡಿದರೆ ಅನೇಕ ರೀತಿಯ beer ಮಾಹಿತಿ ಸಿಗುತ್ತೆ. (ಈ Beer ಇಲ್ಲಿ ಸಿಗುವ Lager)
 ಸುಮಾರು ೨೫-೩೦ ವರ್ಷದ ಹಿಂದೆ, ಬಸವನಗುಡಿ ಅಥವಾ ಮಲ್ಲೇಶ್ವರದ ರಸ್ತೆಗಳಲ್ಲಿ ಒಂಟಿ ಮನೆಗಳು ಇದ್ದವು, ಈಗ  ಎಲ್ಲೆಲ್ಲಿ ನೋಡಿದರೂ ಹಳೇ ಮನೆಗಳನ್ನು ಕೆಡವಿ ೩ ಅಥವಾ ೪ ಅಂತಸ್ತಿನ apartment ಗಳು ಬಂದಿವೆ. ರಸ್ತೆಗಳ ತುಂಬಾ ಮರಳು, ಸಿಮೆಂಟ್ ಇತ್ಯಾದಿ. ಇದು ಸಾಲದು ಅಂತ ಚರಂಡಿ ರಿಪೇರಿ, ಅದರ ಕಲ್ಲಿನ ಚಪ್ಪಡಿಗಳೂ ಸಹ ರಸ್ತೆ ಮಧ್ಯೆ. ಹೀಗಾಗಿ ರಸ್ತೆಯಲ್ಲಿ ನಡೆಯುವುದೇ ಒಂದು ಸಮಸ್ಯೆ, ಗಾಂಧಿ ಬಜಾರ್ ನಂತೂ ಪೂರ್ತಿ ಅಗದು ಬಿಟ್ಟಿದ್ದಾರೆ. ಇದು ಹೇಗೆ ಅನ್ನುವ ಪ್ರಶ್ನೆ ನೀವು ಕೇಳಬಹುದು. ಕಾರಣ, ಇಂಗ್ಲಿಷ್ನನಲ್ಲಿ ಹೇಳಬೇಕಾದರೆ, Lack of Accountability. ಸರಿಯಾದ ಉಸ್ತುವಾರಿ ಸಹ ಕಡಿಮೆ. ಆದರೆ ಸ್ಥಳೀಯ ಜನ ಇದನ್ನ ಸಹಿಸಿಕೊಂಡು ಇದು ತಮ್ಮ ಹಣೆ ಬರಹ ಎಂದು ಸುಮ್ಮನಿರುತ್ತಾರೆ. ನಿಮ್ಮ ಪ್ರತಿನಿಧಿ (ಕಾರ್ಪೊರೇಟರ್ )ಗೆ ದೂರು ಕೊಡಬಹುದಲ್ಲ ಎಂದು ಕೇಳಿದಾಗ ಬಂದ ಉತ್ತರ ಇದು " ಇವರು ಇರುವುದು ನಮಗೆ ಸಹಾಯ ಮಾಡುವುದಕ್ಕೆ ಅಲ್ಲ ತಮ್ಮ ಜೇಬು ತುಂಬಿಸಿಕೊಳ್ಳುವುದಕ್ಕೆ!"
 
ಆದರೆ ನೀವು ಮೈಸೂರಿಗೆ ಹೋಗಿ, ಅಲ್ಲಿನ ವಾತಾವರಣ, ಸೌಂದರ್ಯ ಕಂಡು ಹೆಮ್ಮೆ ಬರುತ್ತೆ. ಸಧ್ಯ ಇಲ್ಲಿ Apartment ಹುಚ್ಚುತನ ಇನ್ನೊ ಬಂದಿಲ್ಲ. ಹಳೆ ಕಟ್ಟಡಗಳನ್ನು ಒಡೆದಿಲ್ಲ, ರಸ್ತೆಯಲ್ಲಿ ಅಷ್ಟೇನೂ ಗಲಾಟೆ ಇಲ್ಲ. ಮುಂದೆ IT ಕಂಪನಿಗಳು ಇಲ್ಲಿ ಬಂದರೆ ಮೈಸೂರಿನ ಗತಿ ಬೆಂಗಳೂರಿನ ಹಾಗೆ ಅನ್ನುವ ನನ್ನ ಅಭಿಪ್ರಾಯ! (ದಯವಿಟ್ಟು Software ನವರು ನನ್ನ ಹತ್ತಿರ ಜಗಳ ಮಾಡಬೇಡಿ, ಇರೋ ವಿಚಾರ ಹೇಳುತ್ತಿದ್ದೇನೆ.)
 ಅಪ್ಪಿ ತಪ್ಪಿ ನೀವು ರಾಜಕೀಯದ ವಿಚಾರ ಎತ್ತಿ ಬೇಡಿ, ನಾನು ಒಮ್ಮೆ ದೇಶದಲ್ಲಿ ಅಸಹಿಸ್ಣುತೆ ( intolerance  ) ಹೆಚ್ಚಾಗಿದೆ ಅನ್ನುವ comment ಮಾಡಿದೆ. ನಮ್ಮ ಕೆಲವು ಸಂಬಂಧಿಕರು ನನ್ನ ಮೇಲೆ serious ಆಗಿ ಜಗಳಕ್ಕೆ ಬಂದರು, ಬಿಬಿಸಿನ ಬೈದರು, ನಿಮ್ಮ ಪತ್ರಿಕೆಗಳು "anti India" ಇನ್ನೂ colonial mind set ಹೋಗಿಲ್ಲ ಇತ್ಯಾದಿ, ಇತ್ಯಾದಿ. ಆದರೆ ಈಗ UK  ಇಂತಹ  ವಿಚಾರದಲ್ಲಿ ಎಷ್ಟು ಮುಂದುವರೆದಿದೆ ಅನ್ನುವ ಮಾಹಿತಿಯನ್ನು ಅವರಿಗೆ ಕೇಳುವ ಕುತೂಹಲ ಅಥವಾ ಉತ್ಸಾಹ ಇರಲಿಲ್ಲ.  
 ಇದ್ದ ಆರು ವಾರದಲ್ಲಿ, ಹೊರಗೆ , ಅಂದರೆ ಬೆಂಗಳೂರು ಬಿಟ್ಟು ಜಾಸ್ತಿ ಅನೇಕ ಕಾರಣಗಳಿಂದ  ಹೋಗಲಿಲ್ಲ. ಆದರೆ ಹೆಸರಘಟ್ಟ ದಲ್ಲಿರುವ Horticulture Research Institute ಗೆ ಭೇಟಿ ಕೊಟ್ಟಿದ್ದು ಅದ್ಭುತವಾಗಿತ್ತು. ನಮ್ಮ ಮನೆಯಲ್ಲಿ ನಮ್ಮಿಬ್ಬರಿಗೂ   ತೋಟಗಾರಿಕೆ ಮೇಲೆ ಆಸಕ್ತಿ ಇದೆ, ಇದರ ಬಗ್ಗೆ ಅನಿವಾಸಿಯಲ್ಲಿ ಹಿಂದೆ ಬರೆದಿದ್ದೇನೆ. ಈ ಸಂಸ್ಥೆ ೧೯೩೮ ರಲ್ಲಿ ಅಂದಿನ ಮೈಸೂರು ಸರ್ಕಾರ ಹಣ್ಣು ಮತ್ತು ತರಕಾರಿ ಸಂಶೋಧನೆಗೆ ಈ ಸಂಸ್ಥೆಯನ್ನು ಹೆಸರಘಟ್ಟದಲ್ಲಿ ಸ್ಥಾಪನೆ ಮಾಡಿದರು. ನಾಲ್ಮಡಿ ಕೃಷ್ಣರಾಜ ಓಡೆಯರ್ ಮಹಾರಾಜರು  ರಾಜ್ಯಕ್ಕೆ ಮಾಡಿದ ಅನೇಕ ಸೇವೆಗಳಲ್ಲಿ ಇದೊಂದು. ಸುಮಾರು ೫೦೦ ಎಕರೆ ವಿಸ್ತರಣೆಯಲ್ಲಿ ಇರುವ ಸಂಸ್ಥೆ ಈಗ ಕೇಂದ್ರ ಸರ್ಕಾರದ Institute of Agricultural  Research (IAR) ಗೆ ಸೇರಿದ್ದು. ಕೆಲವು ಹಣ್ಣುಗಳ ಮತ್ತು  ತರಕಾರಿಯ ಬಗ್ಗೆ ಇಲ್ಲಿನ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಗಿಡಗಳಿಗೆ ಬರುವ ರೋಗ ಮತ್ತು ಅದರ ನಿವಾರಣೆಯ ರೀತಿ ರೈತರಿಗೆ ಮಾಹಿತಿ ಕೊಡುವ ಕೆಲವನ್ನು ಇಲ್ಲಿ ನಡೆಯುತ್ತದೆ. ಇವರ ಸಂಶೋಧನೆ ಅಂತರ ರಾಷ್ಟ್ರೀಯ ಪ್ರಶಂಸೆ ಪಡದಿದೆ ಅನ್ನುವುದು ಹೆಮ್ಮೆಯ ವಿಚಾರ. ಇಲ್ಲೇ ಬೆಳದ ಗಿಡ ಮತ್ತು ಬೀಜಗಳನ್ನ ಖರೀದಿ ಮಾಡಬಹುದು. ಅರ್ಕ (Arka ) ಈ ಸಂಸ್ಥೆಯ ವ್ಯಾಪಾರ ಗುರುತು (Trade Mark ). ಈ ಹೆಸರಿನಲ್ಲಿ ಗಿಡಗಳನ್ನು ಮಾರುವುದರಿಂದ ಜನಗಳಿಗೆ (ರೈತರಿಗೆ) ಇದು ಈ ಸಂಸ್ಥೆಯಿಂದ ಬಂದಿದ್ದು ಅಂಬ ಭರವಸೆ ಬರುತ್ತೆ. ಗುಣಮಟ್ಟದ ಬಗ್ಗೆ( Quality ) ಗೊಂದಲ ಇರುವುದಿಲ್ಲ. IAR ಸೇರಿದ ಸಂಸ್ಥೆಗಳು ಸರ್ಕಾರಕ್ಕೆ ೧೩೦೦೦ ಕೋಟಿ ಆದಾಯ ತರುತ್ತದೆ ಎಂದು ಅಂದಾಜು ಮಾಡಲಾಗಿದೆ. ಇಲ್ಲೇ ಬೆಳೆದ ಗಿಡಗಳ ಬೀಜಗಳನ್ನುಖರೀದಿ ಮಾಡ ಬಹುದು. ೧೫ ರೀತಿಯ Bougainvillea ಮತ್ತು ಗುಲಾಬಿ ಹೂವುಗಳ ತೋಟ ನೋಡುವುದಕ್ಕೆ ಸುಂದರ ವಾಗಿತ್ತು. ಅಲ್ಲಿ ಕೆಲಸ ಮಾಡುವ ಸ್ಥಳೀಯ ಮಹಿಳೆಯಯರು ಹೈಬ್ರಿಡ್ ಮಾವಿನ ಸಸಿಗಳನ್ನು ಮಾಡುವ ಕೌಶಲ್ಯ (Skill ) ವನ್ನು ಮೆಚ್ಚಬೇಕು. IAR ಸೇರಿದ ಸಂಸ್ಥೆಗಳಿಂದ ಸರ್ಕಾರಕ್ಕೆ ೧೩೦೦೦ ಕೋಟಿ ರೂಪಾಯಿ ಆದಾಯ ಎಂದು ಅಂದಾಜು ಮಾಡಲಾಗಿದೆ.
 ಮಾರ್ಚ್ ತಿಂಗಳಲ್ಲಿ ಬಿಸಿಲು ಹೆಚ್ಚು,  ಹೊರಗೆ ಹೋಗುವುದು ಕಷ್ಟ , ಅಲ್ಲದೇ  ಇಲ್ಲಿ ನಮ್ಮ ಮನೆ ಯೋಚನೆ ಬರುವುದು ಸಹಜ, ಆದ್ದರಿಂದ ಆರು ವಾರಕ್ಕೆ ಮೀರಿ ಅಲ್ಲಿರುವುದು ನಮಗೆ ಕಷ್ಟವೇ . ಪುನಃ ಈ ವರ್ಷ ಬೆಂಗಳೂರಿಗೆ ಹೋಗುವ ನಿರೀಕ್ಷೆ ಇದೆ.  

 ರಾಮಮೂರ್ತಿ 
ಬೇಸಿಂಗ್ ಸ್ಟೋಕ್
Author, wife and friends In Bougainvillea Garden