ವಿಜ್ಞಾನ ಮತ್ತು ಕಾಲ್ಪನಿಕ-ವಿಜ್ಞಾನದ ನಡುವಣ ಅನ್ಯೋನ್ಯತೆಯ ಪ್ರತೀಕವೆನಿಸಿದ ಒಂದು ಅದ್ಭುತ ಚಲನಚಿತ್ರ-“Interstellar”! — ಉಮಾ ವೆಂಕಟೇಶ್

 ಸುಮಾರು ೧೮ ವರ್ಷಗಳ ಹಿಂದೆ,ಕ್ಯಾಲಿಫೋರ್ನಿಯಾದ ಮಹಾನಗರ ಲಾಸ್ ಏಂಜಲೀಸ್ ಪಟ್ಟಣದ ಹೊರವಲಯದ ಪಸಡೀನಾದಲ್ಲಿರುವ, ಜಗತ್ಪ್ರಸಿದ್ಧ ಕ್ಯಾಲಿಫೋರ್ನಿಯಾದ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಲ್ಲಿ (California Institute of Technology, CALTECH) ಸಂದರ್ಶಕ ವಿಜ್ಞಾನಿಯಾಗಿದ್ದ ನನ್ನ ಪತಿಯ ಜೊತೆಯಲ್ಲಿ ಸಹಭಾಗಿತ್ವ ಸಂಶೋಧನೆ ನಡೆಸಿದ್ದ ಅಲ್ಲಿನ ಪ್ರಸಿದ್ಧ ಸೈದ್ಧಾಂತಿಕ ಖಭೌತವಿಜ್ಞಾನಿ, ಪ್ರೋಫೆಸ್ಸರ್  ಕಿಪ್ ಥಾರ್ನ್, ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಸಿದ್ಧಿಯಾದವರು.

With Professor Kip Thorne,  (from left 5 th) Theoretical Astrophysicist, CALTECH, Pasadena, Scientific advisor & Executive producer Interstellar movie. at his house party
With Professor Kip Thorne, ( 5 th from left) Theoretical Astrophysicist, CALTECH, Pasadena, Scientific advisor & Executive producer Interstellar movie. at his house party. (CC. Prof. Bangalore Sathyaprakash)

1991ರಿಂದಲೇ, ಈ ವಿಜ್ಞಾನಿಯ ಹೆಸರು ನನಗೆ ಪರಿಚಿತವಿದ್ದು, 1996ರಲ್ಲಿ ಕಿಪ್ ಥಾರ್ನ್ ಅವರನ್ನು ಮುಖತಃ ಭೇಟಿಯಾಗುವ ಸೌಭಾಗ್ಯ ದೊರೆತಿತ್ತು. ಸಾಮಾನ್ಯ ಸಾಪೇಕ್ಷತೆ (General relativity),  ಗುರುತ್ವದ ಅಲೆಗಳು (Gravitational waves), ಹಾಗೂ ಕಪ್ಪು-ಕುಳಿಗಳ (Black holes) ಬಗ್ಗೆ ಅತ್ಯುನ್ನತ ಮಟ್ಟದ ಸಂಶೋಧನೆಯಲ್ಲಿ, ಸುಮಾರು ೪೦ ವರ್ಷಗಳಿಂದ ಕಾರ್ಯನಿರತರಾಗಿರುವ, ಈ ಖಭೌತವಿಜ್ಞಾನಿ, 2006 ರ ಸಮಯದಲ್ಲಿ ಹಾಲಿವುಡ್ಡಿನ ಚಲನಚಿತ್ರವೊಂದರಲ್ಲಿ, ವೈಜ್ಞಾನಿಕ ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸುದ್ದಿ ಭೌತಶಾಸ್ತ್ರ ವಲಯದಲ್ಲಿ ಕಲರವವನ್ನೆಬ್ಬಿಸಿತ್ತು. ಈಗ ೮ ವರ್ಷಗಳಿಂದ ಆ ಚಿತ್ರದ ತಯಾರಿಕೆಯ ಬಗ್ಗೆ ನಮ್ಮ ಕುತೂಹಲ ಬಹಳವಾಗಿದ್ದು, ಇದರ ಬಿಡುಗಡೆಗಾಗಿ ನಾವೆಲ್ಲಾ ಕಾಯುತ್ತಿದ್ದೆವು. “Interstellar” ಅಂದರೆ, ಅಂತರತಾರಾ, ಅಥವಾ ಅಂತರನಕ್ಷತ್ರೀಯ, ಎಂಬ ಅರ್ಥವನ್ನು ಕೊಡುವ ಹೆಸರಿನ ಈ ಚಲನಚಿತ್ರ, ಕಳೆದ ನವೆಂಬರ್ ೫ನೆಯ ತಾರೀಖು,ಕ್ಯಾಲಿಫೋರ್ನಿಯಾ ಮತ್ತು ನವೆಂಬರ್ ೭ರಂದು ಜಗತ್ತಿನ ಎಲ್ಲೆಡೆ ಬಿಡುಗಡೆಯಾಯಿತು.
Read More »

ವನ್ಯ ಜೀವಿಗಳ ಜಾಡುಹಿಡಿದು- ಕರ್ನಾಟಕದ ವನಜೀವ ಜಾಲದ ತೌಲನಿಕ ಅವಲೋಕನ – ಸುದರ್ಶನ ಗುರುರಾಜರಾವ್ ಬರೆಯುತ್ತಾರೆ

ವನ್ಯ ಜೀವಿಗಳ ಜಾಡುಹಿಡಿದು- ಕರ್ನಾಟಕದ ವನಜೀವ ಜಾಲದ ತೌಲನಿಕ ಅವಲೋಕನ.
ಲೇಖಕರು: ಶ್ರೀಯುತ ಸಂಜಯ್ ಗುಬ್ಬಿ

vanyajeevi

vanyajeevi2

“ಜಯ ಸುಂದರ ನದಿವನಗಳ ನಾಡೆ” – ಕುವೆಂಪು
”ಬೆಳುವಲ ಮಲೆ-ಕರೆ ಸುಂದರ ಸೃಷ್ಟಿ”- ಚನ್ನವೀರ ಕಣವಿ
”ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ”- ನಿಸಾರ್ ಅಹ್ಮದ್
”ಚಿಮ್ಮುತ ಓಡಿವೆ ಜಿಂಕೆಗಳು-ಕುಣಿದಾಡುತ ನಲಿದಿವೆ ನವಿಲುಗಳು” ಗಂಧದ ಗುಡಿ
“ಹಸಿರೊಡೆದು ಉಸಿರಾಡಿ ನಗುತಿರುವ ನೆಲದಲ್ಲಿ ಕಾವೇರಿ ಮೈದೋರಿ ನಲಿದಿರುವಳು”- ಮಾಗಿಯ ಕನಸು
“ಮುಗಿಲೇರಿ ಮುತ್ತಿಡುವ ಆಗಸದ ಆಚೆಗೆ ಗಿರಿ ಸಾಲು ತಾನಾಗಿ ಮೆರೆದಾಡಿದೆ
ಚೆಲುವಿನ ರಾಶಿಯ ಗೆಲುವನೂ ಕಾಣಲು ಮಲೆನಾಡ ಮೈಸಿರಿಯು ನೆಲೆ ನಿಂತಿದೆ ..ಎಲ್ಲೆಲ್ಲೂ ನೀನೆ”- ಮಾಗಿಯ ಕನಸು

ಈ ಹಾಡುಗಳನ್ನು, ಕವಿತೆಯ ಸಾಲುಗಳನ್ನು ನಾವು ಓದಿ ಕೇಳಿ, ಸ್ವಲ್ಪ ಮಟ್ಟಿಗೆ ನೋಡಿ ಬಲ್ಲೆವು. ಈ ಸೌಂದರ್ಯದ ಒಳಗಿನ ನಿಜ ಆಳ ಅಗಲಗಳನ್ನು, ಅದರ ಸಂರಕ್ಷಣೆಗೆ ಇರುವ ಸವಾಲುಗಳನ್ನು, ತನು ಮನಗಳನ್ನು ಧಾರೆಯೆರೆದು ಇವುಗಳನ್ನು ಕಾಯಲು ನಡೆಯುತ್ತಿರುವ ತೆರೆಮರೆಯ ಪ್ರಯತ್ನಗಳನ್ನೂ ಸ್ವಂತ ಅನುಭವಗಳ ಮೂಲಕ, ದೃಷ್ಟಾಂತಗಳ ಮೂಲಕ ಉತ್ತಮ ಛಾಯಾಚಿತ್ರಗಳ ಮೂಲಕ ನಮ್ಮ ಮುಂದೆ ಅನಾವರಣಗೊಳಿಸುತ್ತಾ ಸ್ವಾರಸ್ಯಕರ ಭಾಷೆಯ ಲಹರಿಯಲ್ಲಿ ಓದಿಸಿಕೊಂಡು ಹೋಗುವ ಈ ಪುಸ್ತಕ ಅಕಸ್ಮಾತಾಗಿ ನನಗೆ ಸಿಕ್ಕಿದ್ದು ನಿಮಗೆ ಅದರ ಪರಿಚಯ ಮಾಡಿಸಲು ಈ ಲೇಖನ.

Read More »