ಶ್ರದ್ಧಾಂಜಲಿ

ಕೇವಲ ಸಪ್ತಸ್ವರಗಳಿಂದ ಅದೆಂಥ ಅಲೌಕಿಕ  ಲೋಕವನ್ನು ಕಟ್ಟಿಕೊಡುತ್ತದೆ ಸಂಗೀತ!!  ಮಾನವ ಭಾವನೆಗಳಿಗೆಲ್ಲ ಬಣ್ಣತುಂಬುತ್ತದೆ. ನಿಮಿಷಾರ್ಧದಲ್ಲಿ ನವರಸಗಳ ಪ್ರಪಂಚ ಮೈತಳೆಯುತ್ತದೆ. ನಿಮಗಿದು ಅರ್ಥವಾಗಬೇಕೆಂದರೆ ಒಮ್ಮೆ ಟಿ.ವಿ. ವ್ಯಾಲ್ಯೂಮ್ ಪೂರ್ತಿ ಬಂದ್ ಮಾಡಿ ಬರೀ ದೃಶ್ಯವನ್ನು ನೋಡಿ. ಅಲ್ಲಿ ದೆವ್ವದ ಸೀನ್ ಇದ್ದರೂ ನಿಮಗೆ ಹೆದರಿಕೆ ಎನಿಸುವುದಿಲ್ಲ.  ನಾಯಕ -ನಾಯಕಿ ಅಪ್ಪಿ ಮುತ್ತಿಟ್ಟರೂ ನಿಮ್ಮ ಹೃದಯದಲ್ಲಿ ಶೃಂಗಾರ ರಸ ಜಿನುಗುವುದಿಲ್ಲ.  ನಾಯಕ ಫೈಟಿಂಗ್ ಮಾಡುತ್ತ ಏಕಕಾಲಕ್ಕೆ ನೂರು ಜನರನ್ನು ಕೆಡವಿದರೂ  ನೀವು ರೋಮಾಂಚಿತರಾಗುವುದಿಲ್ಲ. ಅಂತೂ  ಸಂಗೀತವಿಲ್ಲದೇ ರಸವಿಲ್ಲ..ಬಣ್ಣವಿಲ್ಲ. ಅಂಥ ಸಂಗೀತ ಲೋಕದ ಮಾಂತ್ರಿಕ ತಬಲಾಪಟು , ಹಲವಾರು ಪ್ರಶಸ್ತಿಗಳ ಗೌರವ ಹೆಚ್ಚಿಸಿದ ಉಸ್ತಾದ್ ಝಾಕೀರ್ ಹುಸೇನ್ ಅವರ ಶೃದ್ಧಾಂಜಲಿಗೆ ಮುಡಿಪು ಇಂದಿನ ಅನಿವಾಸಿ ಸಂಚಿಕೆ.  ಸಂಪಾದಕರು ಗತಕಾಲದ ಕಲಾವಿದರೊದಿಗಿನ ಸಾಕ್ಷಾತ್ ಪ್ರಸಂಗವನ್ನು ನೆನೆಸಿಕೊಂಡಿದ್ದಾರೆ. ರಾಧಿಕಾ ಜೋಶಿಯವರು ತಮ್ಮದೇ ಆದ ಅನನ್ಯ ಶೈಲಿಯ ಇಂಗ್ಲೀಷ್ ಕವನವೊಂದರ ಮೂಲಕ ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. ಬನ್ನಿ.. ನೀವೂ ಓದಿ ನಿಮ್ಮ ಪಾಲಿನ ಅಂಜಲಿಯನ್ನು ಸಲ್ಲಿಸಿ.                           

~ ಸಂಪಾದಕಿ

ವಾಹ್! ಉಸ್ತಾದ್ ವಾಹ್!!

ಕೆಲವು ಚೇತನಗಳೇ ಹಾಗೆ. ಸುಮ್ಮನೇ ಅವರ ಹೆಸರು ಕೇಳಿದರೇನೇ  ಮನಕ್ಕೆಂಥದೋ ಹಾಯೆನ್ನಿಸುವ ಭಾವ, ಅದೇನೋ ನಿರಾಳ. ಎಲ್ಲಿಂದಲೂ, ಏನೂ ನೇರ ಸಂಬಂಧವಿರದೆಯೂ ಅದೇನೋ ಆತ್ಮೀಯ – ಆಪ್ತ ಅನುಭೂತಿ.  ಉಸ್ತಾದ್ ಝಾಕೀರ ಹುಸೇನ್ ಅಂಥದೇಒಂದು ಚೆಂದದ ಚೇತನ. ‘ ಚೆಲುವಯ್ಯಾ ಚೆಲುವೋ ತಾನಿತಂದಾನಾ’ ಅಂದಂತೆ ಅದೆಷ್ಟು ಚೆಲ್ವಿಕೆಗಳ  ಸಂಗಮ?! ಸುಂದರ ಶರೀರ- ಶಾರೀರ– ಅಂತ:ಕರಣಗಳು, ತಬಲಾವನ್ನು ನಾದದ ನದಿಯಾಗಿಸುವ ಅವರ ಶೈಲಿ, ನೆರೆದವರ ಮನ ತಿಳಿಯಾಗಿಸುವ ಲಘು ಹಾಸ್ಯದ  ಎಲ್ಲೆ ಮೀರದ ತೂಕದ ಮಾತುಗಳು. ಒಂದೊಂದೂ ನ ಭೂತೋ ನ ಭವಿಷ್ಯತಿ.

   ಎಲ್ಲಿಂದ, ಯಾವಾಗಿಂದ ಶುರುವಾದದ್ದು ಅವರ ನಂಟು ಎಂದು ಯೋಚಿಸಿ ನೋಡಿದರೆ – ‘ ವಾಹ್ !,ತಾಜ್ ಬೋಲಿಯೆ’ ದಿನಗಳಿಂದ ಅನ್ನಬಹುದು  ಸದಾ ಹಸನ್ಮುಖದ ಈ ಚೆಲುವ ಚೆನ್ನಿಗರಾಯನ ತಬಲಾದ ಮೇಲಿನ ಬೆರಳುಗಳ  ಆ ಸುರಳೀತ, ಸುಲಲಿತ ನಾಧಿನ್ ಧಿನ್ನಾ ನರ್ತನ, ಅಲೆಅಲೆಗುಂಗುರುಗೂದಲಿನ ತೋಂತನನ ನೋಡುತ್ತಿದ್ದರೆ ನಮ್ಮ ಹೃದಯವೂ ‘ ಧಕ್ ಧಕ್ ಕರನೇ ಲಗಾ’  ಆಗಿ ಅಮೃತವಾಹಿನಿಯೊಂದು ಹರಿಯುತ್ತಿದ್ದುದು ಸುಳ್ಳಲ್ಲ. ಸಂಗೀತದ ಬಗ್ಗೆ ಒಂದು ಕೈ ಒಲವು ಹೆಚ್ಚಾದದ್ದೇ ಇವರಿಂದ ಎನ್ನಬಹುದು. ನಮ್ಮ ಅಡುಗೆಮನೆಯಲ್ಲಿ red label   ಹೋಗಿ Taj ಚಹಾ ಬರಲೂ ಇವರೇ ಕಾರಣ.

ಕಲೆಯ ಬಗೆಗಿನ ಅವರ ಪ್ರೀತಿ, ತುಂಬಿದ ಕೊಡ ತುಳುಕುವುದಿಲ್ಲ ಎನ್ನುವಂತಿರುವ ನಯವಿನಯ, ಸಾದಾತನಗಳು, ಮಾನವೀಯತೆಗೆ ಮಿಡಿವ ಅವರ ಮಾತು – ವರ್ತನೆಗಳು ಅವರನ್ನು ಬೇರೆಯದೇ ನೆಲೆಯಲ್ಲಿ ನಿಲ್ಲಿಸುತ್ತವೆ. ಅವರೇ ಹೇಳುವಂತೆ ಸಂಗೀತಕ್ಕಿರುವ ಶಕ್ತಿ ಅಪರಿಮಿತ. ಅದು ಯಾವಾಗಲೂ ಎಲ್ಲ ದೇಶ, ಕಾಲ, ಜನಾಂಗದಲ್ಲೂ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುತ್ತದೆ. ಯಾವ ಧರ್ಮಕ್ಕೂ, ಪ್ರಭುತ್ವಕ್ಕೂ ಇರದ ಅಸಾಧಾರಣ ಶಕ್ತಿಯದು. 

   ಅದು ಸುಮಾರು 88 – 89 ರ ಇಸ್ವಿ. ‘ ಸುರ್ – ಸಂಗಮ್’ ಎನ್ನುವ ಕಾರ್ಯಕ್ರಮಕ್ಕೆ ಝಾಕೀರ್ ಹುಸೇನ್ ಬರುತ್ತಿದ್ದಾರೆನ್ನುವ ಸುದ್ದಿ ಗೊತ್ತಾಯಿತು. ಆದರೆ ಟಿಕೆಟ್ ದರ  500 ರೂಪಾಯಿಗಳು. ಆಗಿನ ಕಾಲಕ್ಕೆ 500 ರ ಮುಖವನ್ನೂ ನಾವು ನೋಡಿರಲಿಲ್ಲ. ಸಿನೆಮಾ  ನೋಡಲು ಹೋದರೆ  ಮೂರು ರೂಪಾಯಿ ಇಪ್ಪತ್ತು ಪೈಸೆಯ ಬಾಲ್ಕನಿ ಟಿಕೆಟ್ ತೆಗೆಸಲೂ ಹಿಂದು ಮುಂದೆ ನೋಡುವ ಕಾಲವದು. ಕಾಲೇಜಿನ ಲೆಕ್ಚರರ್ ಆಗಿದ್ದ ನಮ್ಮ ಮುದ್ದಣ್ಣ ಮಾಮಾಗೆ ಎರಡು ಪಾಸ್ ಸಿಕ್ಕಿತ್ತು. ನಮ್ಮದು 5 ಜನರ ಗ್ಯಾಂಗ್. ( ನಾನು ಹಾಗೂ  4 ಜನ ಮಾಮಾನ ಮಕ್ಕಳು) ನಾವೆಲ್ಲರೂ ನಮಗೂ ಹೋಗಲೇಬೇಕು ಎಂಬ ಒಕ್ಕೊರಲಿನ ಗಾಯನವನ್ನೂ, ಝಾಕೀರ್ ಹುಸೇನ್ ರನ್ನು ನೋಡಲೇಬೇಕೆಂದು ಧಿಮಿಧಿಮಿ ನೃತ್ಯವನ್ನೂ ಶುರುಮಾಡಿದೆವೆನ್ನಿ. “ಅಲ್ರೇ , ನಿಮಗೇನು ಮಹಾ ರಾಗತಾಳ ಜ್ಞಾನ ಅದ? 2-3 ತಾಸಿನ ಕಛೇರಿ ಅದು. ಬ್ಯಾಸರ ಆಗಿ ಬಿಡತದ ನಿಮಗ.” ಅಂದ ಮಾಮನಿಗೆ “ ನಮಗೆಲ್ಲಿ ತಬಲಾ ಕೇಳೂದದ? ಝಾಕೀರ ಹುಸೇನ್ ರನ್ನು ಹತ್ತಿರದಿಂದ ನೋಡಿ ಖುಷಿ ಪಡೂದದ” ಎನ್ನುವ ನಮ್ಮ ಉತ್ತರ ಸಿದ್ಧವಾಗಿತ್ತು  “ ದಿನಾ ಬೆಳಗಾದ್ರ ಟಿವ್ಯಾಗ ನೋಡತಿರಲಾ?” “ ಹೂಂ. ದಿನಾ ಟಿವ್ಯಾಗ ನೋಡಿ ನೋಡೇ ಅವರನ್ನ ನೋಡಲೇಬೇಕು ಅನ್ನಿನಿಸಿದ್ದು. ಇಲ್ಲೀತನಾ, ನಮ್ಮ ಬಿಜಾಪೂರಿಗೆ ಅದರಲ್ಲೂ ನಮ್ಮ ಮನೆ ಹತ್ತಿರದGovt.high school ಗೆ ಬರುತ್ತಿದ್ದಾರೆ. ನಾವು ಹೋಗಲಿಲ್ಲ ಅಂದರೆ ಅದ್ಹೇಗೆ ?” ಎನ್ನುವುದು ನಮ್ಮ ವಾದ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಮನ ಮುಖ ಕಂಡೊಡನೆ ‘ ಝಾಕೀರ್, ತಬಲಾ. ಝಾಕೀರ, ತಬಲಾ’  ಅಂತ ಸ್ಲೋಗನ್ ಕೂಗುತ್ತ ದೊಡ್ಡ ಹರತಾಳವನ್ನೇ ಮಾಡಿ ಅಂತೂ ಯಶಸ್ವಿಯಾದೆವೆನ್ನಿ.ನಮ್ಮ ಬಡಬಡಿಸುವಿಕೆಗೆ, ಹಟಕ್ಕೆ ಸೋತ ನಮ್ಮ ಸೋದರಮಾವ 1,500 ರೂಪಾಯಿಗಳನ್ನು (ಆಗಿನ ಕಾಲಕ್ಕೆ) ಕೊಟ್ಟು ಇನ್ನೂ ಮೂರು ಟಿಕೆಟ್ ಖರೀದಿಸಿ ನಮ್ಮನ್ನು ಆ ಕಾರ್ಯಕ್ರಮಕ್ಕೆ ಕಳಿಸಿದ್ದರು. ಅವರು ಸ್ವಲ್ಪ  ಜೋರು ಮಾಡಿ ನಮ್ಮನ್ನು ಸುಮ್ಮನಾಗಿಸಬಹುದಿತ್ತು. ‘ ರೊಕ್ಕದ ಗಿಡಾ ಅದ ಎನು ಹಿಂದ?’ ಎನ್ನಬಹುದಿತ್ತು. ಆದರೆ ಹಾಗೆ ಮಾಡದೇ ನಮ್ಮ ಬಾಲಿಶ ಹುಚ್ಚುತನವನ್ನು ಅಪರೋಕ್ಷವಾಗಿ ಬೆಂಬಲಿಸಿದ ಆ ತಾಯಂಥಕರಣದ ಜೀವಕ್ಕೆ ಎಷ್ಟು ಮಣಿದರೂ ಕಡಿಮೆ ಎನಿಸುತ್ತದೀಗ.

 ಬಂಗಾರದ ಗುಂಡಿ, ಚೈನು ಪೋಣಿಸಿದ, ತಿಳಿನೀಲಿ ಬಣ್ಣದ ಉದ್ದನೆಯ ಕುರ್ತಾ, ಬಿಳಿ ಶುಭ್ರ ಪಾಯಿಜಾಮಾ ಧರಿಸಿದ ಅವರು ಸ್ಟೇಜ್ ಮೇಲೆ ಬಂದರೆ ನನಗೆ ಯಾರೋ ದೇವ ಮಾನವ ನಡೆದು ಬಂದಂಥ ಭಾವ. ತಬಲಾದ ರಠಈಕ ಅರ್ಥವಾಗದಿದ್ದರೂ ಆ ನಾದದ ಲಹರಿ ತಾನಾಗೇ ನಮ್ಭನ್ನು ತನ್ನ ಸೆಳವಿನಲ್ಲಿ ಎಳೆದೊಯ್ದು ನಮ್ಮನ್ನು ತೇಲಿಸಿ, ತೊಯ್ಯಿಸಿದ್ದು, ಆ ತಬಲಾ – ಡಗ್ಗಾಗಳ ಮೇಲೆ ಅವರು ಹರಿಸಿದ ಆ ದೈವೀಕ ನಾದದ ಹೊಳೆ, ಗುಡುಗಿನ ಆರ್ಭಟ, ಮಳೆಯ ಟಪಟಪ  ಹನಿಗಳ ಸದ್ದು, ಬೀಸುವ ರೊಯ್ ರೊಯ್ ಗಾಳಿ, ಶಿವನ ಡಮರುಗ, ಕೃಷ್ಣನ ಪಾಂಚಜನ್ಯ, ಕುದುರೆಯ ಹೇಷಾರವ, ಖುರಪುಟ.. ಕೇಳುತ್ತಿದ್ದ ಶ್ರೋತೃಗಳೆಲ್ಲ ದಂಗಾಗಿದ್ದರು; ಗುಂಗಿನಲ್ಲಿದ್ದರು.

ಆಗ ಸೆಲ್ಫಿಯ ಕಾಲವಲ್ಲ, ಆಟೋಗ್ರಾಫ್ ದ ಸ್ಪೆಲ್ಲಿಂಗೂ ಗೊತ್ತಿರಲಿಲ್ಲ. ಆದರೆ ಆ ಸುನೆಹರೆ ಕ್ಷಣಗಳು ಎದೆಯ ಗೂಡಲ್ಲಿ ನಿತ್ಯನಿರಂತರ ಹಸಿರು.ಇಷ್ಟು ಬೇಗ ಹೊರಡಬಾರದಿತ್ತು ಉಸ್ತಾದ್ ನೀವು. ಇನ್ನೂ ಇರಬೇಕಿತ್ತು.’ ಸುರ್ ಕಿ ಸಾಧನಾ ಪರಮೇಶ್ವರ್ ಕಿ’ ಎಂಬ ಆ ನಿಮ್ಮ ‘ ಸೋಚ್’ ಇನ್ನಷ್ಟು ಹರಡಬೇಕಿತ್ತು. “ ಕಲಾವಿದ ಹೋದರೇನಂತೆ? ಕಲೆ ಎಲ್ಲಿಗೂ ಹೋಗುವುದಿಲ್ಲ..ಯಾವೂದೂ ಖಾಲಿಯಾಗುವುದಿಲ್ಲ” ಎಂದು ನೀವೇ ಹಲವಾರು ಬಾರಿ ಸಂದರ್ಶನಗಳಲ್ಲಿ ಹೇಳುತ್ತಿದ್ದಿರಾದರೂ ನೀವು ತೆರವು ಮಾಡಿದ ಜಾಗ ಸದಾ ಖಾಲಿಯೇ. ಅದಕ್ಕ್ಯಾವ ಪರ್ಯಾಯವೂ ಇಲ್ಲ. ಹೋಗಿ ಬನ್ನಿ; ಭಾವಪೂರ್ಣ ಶೃದ್ಧಾಂಜಲಿಗಳು.

~ಗೌರಿ ಪ್ರಸನ್ನ

No photos, no videos to mark my tale,
Yet his magic fills my spirit’s sail.
Ustad Zakir Hussain, the tabla’s very name,
A legend whose glory ignites music’s flame.

As a child, through palace halls and Dasara nights,
I witnessed his art beneath Mysuru’s lights.
The memory is faint, yet vivid and clear,
A childlike smile—so pure, so near.

Oh, that smile! A symphony of untold lore,
A joy that sprang from his music’s core.
Each beat of the tabla, each rhythmic embrace,
Lit up his eyes, adorned his face.

Did he ever feel nerves, or pressures vast?
If so, that smile—steadfast, unsurpassed—
Taught us all, in life’s demanding race,
To wear our joy as a saving grace.

I’ve watched his videos, a hundred, no less,
Never a frown, never distress.
Eyes that sparkled, fingers that flew,
Creating celestial rhythms anew.

Even the tea ad, with his father in frame,
Hair aflutter, rhythm the same,
Added a cadence, a timeless beat,
Turning the mundane into something sweet.

My memories now soar beyond the clouds,
Among the stars, where his spirit resounds.
For Zakir Hussain, a maestro so bright,
Plays on forever, in music’s eternal light.

~ ರಾಧಿಕಾ ಜೋಶಿ

ರೂಮೀ ಯ ಕವನಗಳು

**********************************************

ಆಡಿಯೋ ಕೇಳಲು Listen in browser ಮೇಲೆ ಒತ್ತಿರಿ ⬆️⬆️




ಅರಳುವ ಗುಲಾಬಿ ದಳಗಳು

'ದೇವರು ಸೃಷ್ಟಿಸಿದ ಸುಂದರ ಸೂಕ್ಷ್ಮ ಈ ಮುಗ್ಧ ಗುಲಾಬಿಯ ಮೊಗ್ಗು
ಈ ಮೊಗ್ಗಿನ ದಳವನ್ನು ಈ ನನ್ನ ನಯವಿಲ್ಲದ ಕೈಗಳಿಂದ ಹೇಗೆ ಅರಳಿಸಲಿ

ನನ್ನಂತಹ ಅನರ್ಹನಿಗೆ ತಿಳಿಯದ ಈ ರಹಸ್ಯ
ದೇವ ಎಷ್ಟು ಮೃದುವಾಗಿ ನಾಜೂಕಾಗಿ ಅರಳಿಸಿದ
ಈ ಇನಿದಾದ ಹೂ, ನನ್ನ ಕರದಲ್ಲಿ ಬಾಡಿಹೋಗುತ್ತದೆ

ಆ ಭಗವಂತನು ಕಲ್ಪಿಸಿದ ಗುಲಾಬಿಯ ಮೊಗ್ಗನ್ನು
ನನ್ನಿಂದ ಅರಳಿಸಲಾಗಲಿಲ್ಲ
ಈ ನನ್ನ ಜೀವನವನ್ನು ವಿಕಸಿತ ಗೊಳಿಸಲು
ನನ್ನಲಿ ಯಾವ ವಿವೇಕವು ಇದೆ?

ಅವನ ಮೇಲೆ ಭರವಸೆ ಇರಿಸಿ ಅವನನ್ನೇ ಅರಿಸಿ
ದಿನದ ಪ್ರತಿ ಕ್ಷಣವೂ ನಾನು ಅವನ ಮೊರೆ ಹೋಗುವೆ
ಅವನ ದರ್ಶನದ ಹಾದಿಯಲಿ ಈ ಯಾತ್ರಿಕನು
ಅವನ ಮಾರ್ಗದರ್ಶನದಿಂದ ಪ್ರತಿ ಹೆಜ್ಜೆ ಇಡುವೆ

ಆ ದಿವ್ಯ ತೇಜಸ್ವಿಯೇ ಬಲ್ಲ! ನನ್ನ ಮುಂದಿರುವ ಹಾದಿ
ಸಾಗುತ್ತಿರುವೆ ನಾನು ಅವನನ್ನೇ ನಂಬಿ
ಆ ಮುಗ್ಧ ಗುಲಾಬಿಯ ಪ್ರತಿಯೊಂದು ಪಕಳೆಯನ್ನು ಅರಳಿಸುವಂತೆ
ನನ್ನ ಜೀವನದ ಪ್ರತಿಯೊಂದು ಕ್ಷಣವನ್ನು ಪದರುಪದರಾಗಿ ಮುಂದಿಡುತ್ತಾನೆ
ಎನ್ನುವ ಭರವಸೆ ನನ್ನಲಿದೆ

- ರಾಧಿಕಾ ಜೋಷಿ
UNFOLDING  THE ROSE 🌷
It is only a tiny rosebud,
A flower of God's design;
But I cannot unfold the petals
With these clumsy hands of mine.

The secret of unfolding flowers
Is not known to such as I.
GOD opens this flower so sweetly,
When in my hands they fade and die. 🥀

If I cannot unfold a rosebud,
This flower of God's design,
Then how can I think I have wisdom
To unfold this life of mine?

So I'll trust in Him for His leading
Each moment of every day.
I will look to Him for His guidance
Each step of the pilgrim way.

The pathway that lies before me,
Only my Heavenly Father knows.
I'll trust Him to unfold the moments,
Just as He unfolds the rose.

******************************************

ವಿವಾಹ

ಸಪ್ತಪದಿಗೆ ಎಲ್ಲರ ಹಾರೈಕೆ ಇರಲಿ
ಬೆಲ್ಲ ಕಲೆತ ಹಾಲಾಗಲಿ
ಮಧುವಾಗಲಿ, ಮೈಸೂರುಪಾಕಿನಂತಿರಲಿ
ಫಲವನ್ನೂ, ನೆರಳನ್ನೂ ನೀಡಲಿ
ಮಾವಿನ ಮರದಂತೆ
ನಗುವಿನಲಿ ತೇಲಾಡಲಿ
ಪ್ರತಿ ಕ್ಷಣ ಸ್ವರ್ಗಕ್ಕೆ ಕಿಚ್ಚಾಗಲಿ
ಸಹಾನುಭೂತಿಯ ಸಂಕೇತವಾಗಲಿ
ಎಂದಿಗೂ, ಎಂದೆಂದಿಗೂ ಆನಂದ ತುಳುಕಲಿ
ನ್ಯಾಯವಿರಲಿ, ಹೆಸರಾಗಲಿ
ಚಂದಿರನ ಬರಮಾಡುವ ಶುಭ್ರ ನೀಲಾಕಾಶವಾಗಲಿ
ಭಗವಂತನ ಸತ್ವ ಇಳಿವಂದವ
ಬಣ್ಣಿಸಲು ಮಾತೇ ಮರೆವಂತಾಗಲಿ

- ರಾಂ.
This Marriage

May these vows and this marriage be blessed.
May it be sweet milk,
this marriage, like wine and halvah.
May this marriage offer fruit and shade
like the date palm.
May this marriage be full of laughter,
our every day a day in paradise.
May this marriage be a sign of compassion,
a seal of happiness here and hereafter.
May this marriage have a fair face and a good name,
an omen as welcomes the moon in a clear blue sky.
I am out of words to describe
how spirit mingles in this marriage.

********************************************