ಎರಡನೆ ಪೀಳಿಗೆಯ ಇಂಗ್ಲಂಡಿನ ಯುವ-ಕನ್ನಡಿಗರು ಏನು ಹೇಳುತ್ತಾರೆ? – ಆಶೀರ್ವಾದ್ ಮೆರ್ವೆ, ಅನನ್ಯಾ ಪ್ರಸಾದ್ ಮತ್ತು ರವಿಶಂಕರ್ ಸರಗೂರ್ (ತರ್ಜುಮೆ: ಉಮಾ ವೆಂಕಟೇಶ್)

 

ಇದರ ಇಂಗ್ಲಿಷ್ ಆವೃತ್ತಿಗೆ ಈ ಕೊಂಡಿ ನೋಡಿ: http://wp.me/p4jn5J-fY

ಈ ವರ್ಷದ ಕನ್ನಡ ಬಳಗ ಯು.ಕೆ ಆಯೋಜಿಸಿದ್ದ ದೀಪಾವಳಿಯ ಸಮಾರಂಭದಲ್ಲಿ, ಮೊದಲನೆಯ ದಿನದಂದು, ಮೊತ್ತ ಮೊದಲ ಬಾರಿಗೆ, ಕನ್ನಡ ಬಳಗದ ಆಶ್ರಯದಲ್ಲಿ  “ಯುವ-ಜನ ಕಾರ್ಯಕ್ರಮವನ್ನು” ಒಂದು ಪರ್ಯಾಯ ಸಭೆಯನ್ನಾಗಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು, ಡಾ ರವಿಶಂಕರ್ ಸರಗೂರ್, ಕು. ಅನನ್ಯಾ ಪ್ರಸಾದ್, ಹಾಗೂ ಡಾ ಆಶೀರ್ವಾದ್ ಮೆರ್ವೆ ಅವರು ಉತ್ತಮ ರೀತಿಯಲ್ಲಿ ನಿರ್ದೇಶಿಸಿ ನಡೆಸಿದರು.

KBUK 2014 Youth programme 2ಈ ಕಾರ್ಯಕ್ರಮದ ಮುಖ್ಯ ಉದ್ದೇಶವು, ಹದಿಹರೆಯದವರು ಮತ್ತು ಯುವಜನರನ್ನು ಅವರದೇ ಆಸಕ್ತಿ ಮತ್ತು ಅಭಿರುಚಿಯಿರುವ ವಿಷಯಗಳಲ್ಲಿ ಉದ್ಯುಕ್ತರನ್ನಾಗಿಸಿ, ಕನ್ನಡ ಬಳಗ, ಯು.ಕೆ ಸಂಘವು ಅವರಿಗೆ ಯಾವ ರೀತಿಯಲ್ಲಿ ಸಂಗತವಾಗಬಹುದು ಎನ್ನುವ ಬಗ್ಗೆ ಅವರ ದೃಷ್ಟಿಕೋನಗಳು ಮತ್ತು ಅಭಿಪ್ರಾಯಗಳನ್ನು ಅರ್ಥಮಾಡಿಕೊಳ್ಳುವುದಾಗಿತ್ತು. ಈ ಕಾರ್ಯಕ್ರಮವು, ಯು.ಕೆಯಲ್ಲಿ ವಾಸವಾಗಿರುವ ಎರಡನೆಯ ಪೀಳಿಗೆಯ ಯುವ-ಕನ್ನಡಿಗರಿಗೆ ಸಂಬಂಧಿಸಿದ ಹಲವಾರು ಕಾರ್ಯೋಪಯೋಗಿ ವಿಷಯಗಳ ಬಗ್ಗೆ ನಡೆಸಿದ ಚರ್ಚೆಯನ್ನು ಒಳಗೊಂಡಿತ್ತು. ಈ ಕಾರ್ಯಕ್ರಮವನ್ನು, ರಸಪ್ರಶ್ನೆಗಳ ಒಂದು ಆಸಕ್ತಿಪೂರ್ಣ ಸ್ಪರ್ದೆಯ ಮೂಲಕ ಅಂತ್ಯಗೊಳಿಸಲಾಯಿತು.
Read More »

‘ಕನ್ನಡದ ಬೆಳವಣಿಗೆಗೆ ಎಷ್ಟು ದುಡಿದರೂ ಕಡಿಮೆಯೇ’ – ಶಿವರಾಂ ಸಂದರ್ಶನ: ಉಮಾ ವೆಂಕಟೇಶ್

ಉಮಾ ವೆಂಕಟೇಶ್: ಶಿವರಾಮ್ ಅವರೆ, ನೀವು ಕನ್ನಡ ಚಲನಚಿತ್ರ ರಂಗದಲ್ಲಿ ಮತ್ತು ರಂಗಭೂಮಿಯಲ್ಲಿ ಸುಮಾರು ನಾಲ್ಕು ದಶಕಗಳ ಕಾಲ, ನಟ, ನಿರ್ಮಾಪಕ, ನಿರ್ದೇಶಕನಾಗಿ ಬಹಳ ಒಳ್ಳೆಯ ಕಾರ್ಯಗಳನ್ನು ಈಗಾಗಲೇ ಮಾಡಿದ್ದೀರಿ. ಈ ರಂಗಗಳಲ್ಲಿ ಇನ್ನೂ ನಿಮಗೆ ಮಾಡಬೇಕು ಎಂದು ಅನಿಸಿರುವ ಕಾರ್ಯಗಳು ಇವೆಯೇ?

ಶಿವರಾಂ ಸಂದರ್ಶನದಲ್ಲಿ ಉಮಾ ವೆಂಕಟೇಶ್
ಶಿವರಾಂ ಸಂದರ್ಶನದಲ್ಲಿ ಉಮಾ ವೆಂಕಟೇಶ್

ಶಿವರಾಮ್: ಇನ್ನೂ ಬೇಕಾದಷ್ಟು ಕಾರ್ಯಗಳಿವೆ. ಇನ್ನೂ ಅಪೂರ್ಣವಾಗಿರುವ ಕಾರ್ಯಗಳು ಬೇಕಾದಷ್ಟಿವೆ. ನಮ್ಮ ಜೀವನವೇ ಒಂದು ರೀತಿಯಲ್ಲಿ ಅಪೂರ್ಣ.  ಇನ್ನೂ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಬೇಕು ಎಂಬ ಆಸೆಯಿದೆ, ನಾನು ಮೂಲತಹ ರಂಗಭೂಮಿಯಿಂದ ಬಂದವನು. ರಂಗಭೂಮಿಯಲ್ಲಿ ನಟಿಸುವ ಕೆಲಸ ಮಾಡಿ ಬದುಕಲು ಸಾಧ್ಯವಿಲ್ಲ. ಆದ್ದರಿಂದ ನಾನು ಸಿನಿಮಾರಂಗಕ್ಕೆ ಹೋದೆ. ನನಗೆ ಇನ್ನೂ ಬಹಳ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿ, ಆ ನಾಟಕಗಳನ್ನು ರಾಜ್ಯದಾದ್ಯಂತ ಕೊಂಡೊಯ್ದು, ಅದರಿಂದ ಕಡೆಯ ಪಕ್ಷ ಒಂದು ಕೋಟಿ ರೂಪಾಯಿಗಳನ್ನಾದರೂ ಸಂಪಾದಿಸಿ, ಆ ಹಣವನ್ನು ರಂಗಭೂಮಿಯ ಕಲಾವಿದರ ಕ್ಷೇಮ ನಿಧಿಗಾಗಿ ಉಪಯೋಗಿಸ ಬೇಕು ಎನ್ನುವ ಒಂದು ಮಹದಾಸೆಯಿದೆ.  ನಾನು ಒಂದು ಕೋಟಿ ಸಂಪಾದಿಸಿದ ಮೇಲೆ, ನಮ್ಮ ಸರ್ಕಾರವನ್ನು ಕೇಳಿ ಅವರಿಂದ ಒಂದು ಕೋಟಿ ರೂಪಾಯಿಗಳ ಹಣವನ್ನು ಅದಕ್ಕೆ ಸೇರಿಸಿ, ರಂಗ ಭೂಮಿಯ ಕಲಾವಿದರು ಯಾರನ್ನೂ ಹಣ ಬೇಡದಿರುವಂತೆ ಅವರ ಕ್ಷೇಮನಿಧಿಯನ್ನು ಪ್ರಾರಂಭಿಸುವ ಯೋಜನೆ ನನಗಿದೆ.  ನನ್ನ ಜೊತೆಯ ಅನೇಕ ಕಲಾವಿದರು ಅನುಭವಿಸುವ ನೋವನ್ನು IMG_6247ದೂರ ಮಾಡಬೇಕು. ಇತ್ತೀಚೆಗೆ ನಿಧನರಾದ ಗಾಂಧಿ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ ಪ್ರಖ್ಯಾತ ಹಾಲಿವುಡ್ ನಿರ್ದೇಶಕ, ಸರ್ ರಿಚರ್ಡ್ ಅಟೆನ್ಬರೋ, ಭಾರತ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿಗಳನ್ನು ಕಲಾವಿದರ ನಿಧಿಗೆಂದು ಕೊಟ್ಟರು. ಅದನ್ನು Senior artistes welfare fund of India ಎಂದು ಪ್ರಾರಂಭಿಸಿ, ಅದರಲ್ಲಿ ವಿನಿಯೋಗಿಸಿದ್ದಾರೆ. ಅದಕ್ಕೆ ಕರ್ನಾಟಕದಿಂದ ನನ್ನನ್ನು ಟ್ರಸ್ಟಿಯನ್ನಾಗಿ ಮಾಡಿದ್ದಾರೆ. ಇದಕ್ಕಾಗಿ ನಾನು ಕರ್ನಾಟಕದ ಸುಮಾರು ೨೫ ಅತ್ಯಂತ ಬಡ ಕಲಾವಿದರನ್ನು ಆರಿಸಿದೆ. ಈ ೨೫ ಮಂದಿಯಲ್ಲಿ, ಈಗ ಸುಮಾರು ೧೫ ಕಲಾವಿದರಿಗೆ ಪ್ರತಿ ತಿಂಗಳಿಗೆ ೧೦೦೦ ರೂಪಾಯಿಗಳ ಪಿಂಚಣಿ ಸಿಗುತ್ತಿದೆ.  ಇದರ ಜೊತೆಗೆ ರಂಗಭೂಮಿಯಲ್ಲಿ ಇನ್ನೂ ಅನೇಕ ಪ್ರಯೋಗಗಳನ್ನು ಮಾಡುವ ಆಸೆಯಿದೆ.

Read More »